ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಥಾನಿಕರಿಂದ ಬಿಜೆಪಿಗೆ ಹಿನ್ನಡೆ

Last Updated 7 ನವೆಂಬರ್ 2018, 20:25 IST
ಅಕ್ಷರ ಗಾತ್ರ

ತುಮಕೂರು: ‘ಬೆಂಗಳೂರು, ಬಳ್ಳಾರಿ, ಶಿವಮೊಗ್ಗ ಹೀಗೆ ಕೆಲವು ಕಡೆಗಳಲ್ಲಿ ಪಕ್ಷದ ಕೆಲವು ನಾಯಕರು ತಮ್ಮದೇ ಆದ ಸಂಸ್ಥಾನಗಳನ್ನು ಕಟ್ಟಿಕೊಂಡಿದ್ದಾರೆ. ಇಂತಹವರು ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ’ ಎಂದು ಬಿಜೆಪಿ ಹಿರಿಯ ಮುಖಂಡ ಸೊಗಡು ಶಿವಣ್ಣ ಆರೋಪಿಸಿದರು.

ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷದ ಅಸ್ತಿತ್ವವೇ ಕಾರ್ಯಕರ್ತರು. ಆದರೆ, ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಬೇರೆಯವರ ಹಿಡಿತಕ್ಕೆ ಪಕ್ಷ ಸಿಲುಕುತ್ತಿದೆ. ಇದರಿಂದ ಉಪಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಯಿತು. ಇನ್ನಾದರೂ ಈ ಧೋರಣೆ ಬದಲಾಗಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ 6 ಲಕ್ಷಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಇದ್ದಾರೆ. ಎಲ್ಲೆಡೆ ಪ್ರಬಲ ಪಡೆ ಇದೆ. ಆದರೆ ಉಪಚುನಾವಣೆ ನಡೆದ ಐದು ಕ್ಷೇತ್ರಗಳಲ್ಲಿಯೂ ಕಾರ್ಯಕರ್ತರ ಬಲವನ್ನು ಸಮರ್ಥವಾಗಿ ಬಳಸಿಕೊಂಡಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT