‘ಬಹುಕೋಟಿ ಆಮಿಷವೊಡ್ಡಿ ಶಾಸಕರನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ ಎಂಬ ಸುಳ್ಳು ಆಪಾದನೆಯನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಸುಖಾಸುಮ್ಮನೆ ಆರೋಪ ಎದುರಿಸುವುದಕ್ಕಿಂತ ಶಾಸಕರಿಂದ ರಾಜೀನಾಮೆ ಕೊಡಿಸಿ, ಒಂದು ಕೈ ನೋಡಿಯೇ ಬಿಡುವುದು ಈಗಿನ ಆಲೋಚನೆ. ಈ ನಿಟ್ಟಿನಲ್ಲಿ ನಾಯಕರು ಕಾರ್ಯಪ್ರವೃತ್ತರಾಗಿರುವುದು ಹೌದು’ ಎಂದು ಹೆಸರು ಹೇಳಲಿಚ್ಛಿಸದ ಬಿಜೆಪಿ ನಾಯಕರೊಬ್ಬರು ತಿಳಿಸಿದರು.