ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2008ರಿಂದ ಎಲ್ಲ ಪ್ರಕರಣಗಳು ತನಿಖಾ ವ್ಯಾಪ್ತಿಗೆ: ಸದನದಲ್ಲಿ ಬಿಜೆಪಿ ಪಟ್ಟು

Last Updated 12 ಫೆಬ್ರುವರಿ 2019, 12:26 IST
ಅಕ್ಷರ ಗಾತ್ರ

ಬೆಂಗಳೂರು:‘ಆಪರೇಷನ್‌ ಕಮಲದ ಆಡಿಯೊ ಪ್ರಕರಣದ ತನಿಖೆ ಹೊಣೆಯನ್ನು ಯಾವುದೇ ಕಾರಣಕ್ಕೂ ವಿಶೇಷ ತನಿಖಾ ತಂಡಕ್ಕೆ ಒಪ್ಪಿಸಬಾರದು. ಒಂದು ವೇಳೆ ಒಪ್ಪಿಸಿದರೆ, 2008ರಿಂದ ಇಲ್ಲಿವರೆಗೆ ನಡೆದಿರುವ ಎಲ್ಲ ಪ್ರಕರಣಗಳನ್ನೂ ತನಿಖಾ ವ್ಯಾಪ್ತಿಗೆ ಸೇರಿಸಬೇಕು’ ಎಂದು ಬಿಜೆಪಿ ಸದಸ್ಯರು ಆಗ್ರಹಿಸಿದರು.

ವಿಧಾನಸಭೆಯಲ್ಲಿ ಆಡಿಯೊ ವಿಷಯವಾಗಿ ಮಂಗಳವಾರ ಎರಡನೇ ದಿನವೂ ಪರ–ವಿರೋಧ ಚರ್ಚೆಗಳು ನಡೆದವು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯರು, ‘ಎಸ್‌ಐಟಿ ತನಿಖೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ಈ ಪ್ರಕರಣವನ್ನು ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ಒತ್ತಾಯಿಸಿದರು.

ಸಭಾಧ್ಯಕ್ಷರಾದ ಕೆ.ಆರ್‌.ರಮೇಶ್‌ ಕುಮಾರ್‌ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರಿಗೆ ಅಭಿಪ್ರಾಯ ತಿಳಿಸಲು ಅವಕಾಶ ಕಲ್ಪಿಸಿದರು.

ತನಿಖೆಯನ್ನು ಎಸ್‌ಐಟಿಗೆ ವಹಿಸದೆ ಸದನ ಸಮಿತಿ ರಚಿಸಿ ಅದಕ್ಕೆ ನೀಡಬೇಕು. 15 ದಿನದಲ್ಲೇ ಬೇಕಿದ್ದರೆ ವರದಿ ತರಿಸಿಕೊಳ್ಳಿ ಎಂದು ಬಿಜೆಪಿಯ ಶಾಸಕರಾದ ಮಾಧುಸ್ವಾಮಿ, ಎಸ್‌.ಸುರೇಶ್‌ಕುಮಾರ್‌ ಸೇರಿದಂತೆ ಇತರ ಸದಸ್ಯರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT