<p><strong>ಹುಬ್ಬಳ್ಳಿ: </strong>ಬಿಜೆಪಿ ರಾಷ್ಟ್ರಪತಿ ಆಳ್ವಿಕೆ ಹೇರಲು ಹುನ್ನಾರ ಮಾಡುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ಮಾತುಎಂದುಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಹೇಳಿದರು.</p>.<p>ಇಲ್ಲಿನ ಸಾರ್ವಜನಿಕ ಆಹವಾಲು ಸ್ವೀಕರಿಸುವ ಸಭೆಯಲ್ಲಿ ಮಾತನಾಡಿದ ಅವರು,ಮೈತ್ರಿ ಸರ್ಕಾರ ಪ್ರತಿ ಹಂತದಲ್ಲೂ ಸಂವಿಧಾನ ಉಲ್ಲಂಘಿಸುತ್ತಿದೆ ಆದರೆ ನಾವು ಸಂವಿಧಾನ ರಕ್ಷಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.</p>.<p>ವಿಶ್ವಾಸಮತಯಾಚನೆ ಮಾಡ್ತೀನಿ ಅಂತಾ ಕುಮಾರಸ್ವಾಮಿಯವರೇ ತೀರ್ಮಾನ ಮಾಡಿದ್ದರು. ಆದರೆ ಅವರು ಇಲ್ಲಿಯವರೆಗೂವಿಶ್ವಾಸಮತಯಾಚನೆ ಮಾಡಿಲ್ಲ, ಸಂವಿಧಾನ ಮತ್ತು ಸಂವಿಧಾನ ಸಂಸ್ಥೆಗಳಿಗೆ ಯಾವುದೇ ಬೆಲೆ ಕೊಡದ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ವಿಶ್ವಾಸಮತಯಾಚನೆಗೆ ಐದು ದಿನ ತೆಗೆದುಕೊಳ್ಳುವ ಇತಿಹಾಸವನ್ನ ಅವರು ಸೃಷ್ಠಿಸಿದ್ದಾರೆ,ನೆಗೆಟಿವ್ ಇತಿಹಾಸ ಸೃಷ್ಠಿ ಮಾಡುವಲ್ಲಿ ಕುಮಾರಸ್ವಾಮಿ ಆ್ಯಂಡ್ ಕಂಪೆನಿ ಎಕ್ಸ್ಫರ್ಟ್ ಆಗಿದೆ ಎಂದು ವ್ಯಂಗ್ಯವಾಡಿದರು.<br /><br />ಬಿಜೆಪಿಯವರು ಮೈತ್ರಿ ಶಾಸಕರಿಗೆ ದುಡ್ಡು ಕೊಟ್ಟಿದ್ದರೆ, ಆಗಲೇ ದೂರು ಕೊಡಬೇಕಿತ್ತು. ಆದರೆ, ಆ ರೀತಿ ಮಾಡದೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗೂರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದು ಖಂಡನೀಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಬಿಜೆಪಿ ರಾಷ್ಟ್ರಪತಿ ಆಳ್ವಿಕೆ ಹೇರಲು ಹುನ್ನಾರ ಮಾಡುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ಮಾತುಎಂದುಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಹೇಳಿದರು.</p>.<p>ಇಲ್ಲಿನ ಸಾರ್ವಜನಿಕ ಆಹವಾಲು ಸ್ವೀಕರಿಸುವ ಸಭೆಯಲ್ಲಿ ಮಾತನಾಡಿದ ಅವರು,ಮೈತ್ರಿ ಸರ್ಕಾರ ಪ್ರತಿ ಹಂತದಲ್ಲೂ ಸಂವಿಧಾನ ಉಲ್ಲಂಘಿಸುತ್ತಿದೆ ಆದರೆ ನಾವು ಸಂವಿಧಾನ ರಕ್ಷಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.</p>.<p>ವಿಶ್ವಾಸಮತಯಾಚನೆ ಮಾಡ್ತೀನಿ ಅಂತಾ ಕುಮಾರಸ್ವಾಮಿಯವರೇ ತೀರ್ಮಾನ ಮಾಡಿದ್ದರು. ಆದರೆ ಅವರು ಇಲ್ಲಿಯವರೆಗೂವಿಶ್ವಾಸಮತಯಾಚನೆ ಮಾಡಿಲ್ಲ, ಸಂವಿಧಾನ ಮತ್ತು ಸಂವಿಧಾನ ಸಂಸ್ಥೆಗಳಿಗೆ ಯಾವುದೇ ಬೆಲೆ ಕೊಡದ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ವಿಶ್ವಾಸಮತಯಾಚನೆಗೆ ಐದು ದಿನ ತೆಗೆದುಕೊಳ್ಳುವ ಇತಿಹಾಸವನ್ನ ಅವರು ಸೃಷ್ಠಿಸಿದ್ದಾರೆ,ನೆಗೆಟಿವ್ ಇತಿಹಾಸ ಸೃಷ್ಠಿ ಮಾಡುವಲ್ಲಿ ಕುಮಾರಸ್ವಾಮಿ ಆ್ಯಂಡ್ ಕಂಪೆನಿ ಎಕ್ಸ್ಫರ್ಟ್ ಆಗಿದೆ ಎಂದು ವ್ಯಂಗ್ಯವಾಡಿದರು.<br /><br />ಬಿಜೆಪಿಯವರು ಮೈತ್ರಿ ಶಾಸಕರಿಗೆ ದುಡ್ಡು ಕೊಟ್ಟಿದ್ದರೆ, ಆಗಲೇ ದೂರು ಕೊಡಬೇಕಿತ್ತು. ಆದರೆ, ಆ ರೀತಿ ಮಾಡದೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗೂರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದು ಖಂಡನೀಯ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>