‘ರಾಜ್ಯದಲ್ಲಿ ನೆರೆ- ಬರದಂಥ ಸವಾಲಿನ ಕಾಲಘಟ್ಟದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅವರಿಗೆ ಬಲ ನೀಡುವುದು ನನ್ನ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಪಕ್ಷದ ವೇದಿಕೆ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಹೇಳಿಕೆ ನೀಡಬಾರದು’ ಎಂದು ಸೂಚಿಸಿದರು.