ಬೆಂಗಳೂರು: ಬಿಜೆಪಿ ಬಳಿ ಸಂಖ್ಯೆ ಇದ್ದರೆ ಸರ್ಕಾರ ಅವಿಶ್ವಾಸ ಮಂಡಿಸಲಿ. ಅದನ್ನು ಎದುರಿಸಲು ಸಿದ್ಧ ಎಂದು ಸಚಿವ ಕೃಷ್ಣಬೈರೇಗೌಡ ಅವರು ಕೇಸರಿ ಪಾಳಯಕ್ಕೆ ಸವಾಲೊಡ್ಡಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ಅಗಿದೆ. ಮುಖ್ಯಮಂತ್ರಿ ಇದನ್ನು ಸ್ಪಷ್ಟ ಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ವಿರೋಧ ಪಕ್ಷದ ಸವಾಲು ಎದುರಿಸಲು ಸಿದ್ಧರಿದ್ದೇವೆ. ಹಣಕಾಸು ಮಸೂದೆಯಲ್ಲಿ ಸರ್ಕಾರಕ್ಕೆ ಸೋಲಾದರೆ, ಆಗ ನೋಡೊಣ ಎಂದೂ ತಿಳಿಸಿದರು.
ತಮ್ಮ ಬಳಿ ಸಂಖ್ಯೆ ಇದೆ ಎಂದು ಹೇಳಿಕೊಳ್ಳು ಬಿಜೆಪಿ ಅದನ್ನು ಸಾಬೀತುಪಡಿಸಲಿ. ಅವಿಶ್ವಾಸ ಯಾವಾಗ ಕೈಗೆ ತೆಗೆದುಕೊಳ್ಳಬೇಕು ಎಂಬುದು ಸಭಾಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದೂ ಹೇಳಿದರು.