‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯನ್ನು ಕುಮಾರಸ್ವಾಮಿ ಅವರು ಒಂದು ದಿನ ಮುಂಚಿತವಾಗಿಯೇ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಸಂಪುಟದ ಬಹುತೇಕ ಸಚಿವರ ಜತೆಗೂಡಿ ಆದಾಯ ತೆರಿಗೆ ಇಲಾಖೆ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಈ ಮೂಲಕ ದೇಶದ ಒಕ್ಕೂಟ ವ್ಯವಸ್ಥೆಗೆ ಚ್ಯುತಿ ತಂದಿದ್ದಾರೆ’ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದರು.