‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಗೃಹ ಸಚಿವ ಎಂ.ಬಿ.ಪಾಟೀಲ ಬರೆದಿರುವ ಪತ್ರದ ಬಗ್ಗೆ ಪ್ರಸ್ತಾಪಿಸಿದ್ದ ಮಹೇಶ ಹೆಗಡೆ ಎಂಬುವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಈ ರೀತಿಯ ಕಿರುಕುಳ, ಬಂಧನ ಮುಂದುವರಿದರೆ ಬಿಜೆಪಿ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದೆ’ ಎಂದು ಲಿಂಬಾವಳಿ ಎಚ್ಚರಿಸಿದರು.