‘ಕೇವಲ ಕರ್ನಾಟಕದಲ್ಲಿ ಮಾತ್ರ ಅಲ್ಲ, ಇತರ ರಾಜ್ಯಗಳಲ್ಲೂ ಅವರು ಆಪರೇಷನ್ ನಡೆಸುವ ಸಾಧ್ಯತೆ ಇದೆ. ಟಿಎಂಸಿಯ 40 ಶಾಸಕರ ಜೊತೆ ಸಂಪರ್ಕ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಹೇಳಿದ್ದಾರೆ. ಇಂತಹದ್ದೇ ಹೇಳಿಕೆಯನ್ನು ಮಧ್ಯಪ್ರದೇಶದಲ್ಲೂ ನೀಡಿದ್ದಾರೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರೊಬ್ಬರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ’ ಎಂದು ಹೇಳಿದರು.