‘ಕಳೆದ ಎಂಟು ತಿಂಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಿರಂತರವಾಗಿ ಸಾಗಿದೆ. ಇದರಲ್ಲಿ ಕಾಂಗ್ರೆಸ್ ಶಾಸಕರ ಪಾತ್ರವೇ ದೊಡ್ಡದಿದೆ. ಇದರಿಂದಾಗಿ ಮೈತ್ರಿ ಸರ್ಕಾರ ಟೇಕಾಫ್ ಆಗಿಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ. ಜತೆಗೆ, ನಮ್ಮ ಪಕ್ಷದಿಂದಲೂ ಆಪರೇಷನ್ ಕಮಲದ ಯತ್ನ ಸಾಗಿದೆ. ಅತೃಪ್ತ ಶಾಸಕರ ಸಂಖ್ಯೆ ಹೆಚ್ಚಿದರೆ ಅಧಿವೇಶನ ಮುಗಿಯುವ ಮುನ್ನವೇ ಸರ್ಕಾರ ಪತನವಾಗಲಿದೆ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸುವ ಕೆಲಸ ಇನ್ನಷ್ಟು ಜೋರಾಗಲಿದೆ. ಕಲಾಪಕ್ಕೆ ಅಡ್ಡಿಪಡಿಸುವುದು ಈ ಕಾರ್ಯತಂತ್ರದ ಭಾಗ’ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.