ಮೈಸೂರು: ನಮ್ಮದು ಕೂಡ ಸಮ್ಮಿಶ್ರ ಸರ್ಕಾರ ಇದ್ದಂತೆ.ಹೀಗಾಗಿ ಎಲ್ಲರನ್ನೂ ತೃಪ್ತಿಪಡಿಸುವುದು ಅಸಾಧ್ಯ ಎಂದು ನೂತನ ಸಚಿವ ವಿ.ಸೋಮಣ್ಣ ಹೇಳಿದರು.
ಮೈಸೂರಿನಲ್ಲಿ ದಸರಾ ಗಜಪಡೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗ 17 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಮುಂದೆ ಹಲವು ಮಂದಿಗೆ ಸಚಿವ ಸ್ಥಾನ ಕಲ್ಪಿಸಬೇಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರಾಮದಾಸ್ ಅವರಂಥವರಿಗೆ ಅವಕಾಶ ಸಿಗಲಿದೆ ಎಂದರು.