ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಹಾಗೂ ನಟ–ರಾಜಕಾರಣಿ ಕಮಲ್ ಹಾಸನ್ ಗೋಡ್ಸೆ ಕುರಿತಾಗಿ ನೀಡಿರುವ ಹೇಳಿಕೆಗಳು ತೀವ್ರ ಚರ್ಚೆಯಲ್ಲಿದ್ದು, ಹಲವರು ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಬಿಜೆಪಿಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಪ್ರತಿಕ್ರಿಯಿಸಿ, ‘ಸಾಧ್ವಿ ಅವರ ಹೇಳಿಕೆಯನ್ನು ಬಿಜೆಪಿ ಒಪ್ಪುವುದಿಲ್ಲ. ಪಕ್ಷ ಈ ಹೇಳಿಕೆಯನ್ನು ಖಂಡಿಸುತ್ತದೆ’ ಎಂದಿದ್ದರು.