<p><strong>ಬೆಂಗಳೂರು: </strong>ಅಧಿಕಾರ ಬಂದಾಗ ಪಕ್ಷದ ಕಾರ್ಯಕರ್ತರು ಮೊದಲಾಗಿ ದೂರವಾಗುವ ಅಪಾಯ ಇದೆ. ಇದನ್ನು ತಪ್ಪಿಸುವ ಸಲುವಾಗಿ ಕಾರ್ಯಕರ್ತರ ಅಹವಾಲುಗಳನ್ನು ಪಕ್ಷದ ಕಚೇರಿಯಲ್ಲಿ ಕುಳಿತು ಆಲಿಸುವ ಪರಿಪಾಠ ಬಿಜೆಪಿ ಕಚೇರಿಯಲ್ಲಿ ಆರಂಭವಾಗಿದೆ.</p>.<p>ಶನಿವಾರ ಬೆಳಿಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಜೃತಿ, ಸಕ್ಕರೆ ಸಚಿವ ಸಿ.ಟಿ.ರವಿ ಅವರು ಹೀಗೆ ಅಹವಾಲು ಆಲಿಸಿದರು.<br />ಸ್ವತಃ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಅಹವಾಲು ನೀಡಿದ್ದು ವಿಶೇಷವಾಗಿತ್ತು.</p>.<p>'ನಾನು ನಡೆಸುತ್ತಿರುವ ಎರಡನೇ ಅಹವಾಲು ಸ್ವೀಕಾರ ಕಾರ್ಯಕ್ರಮ ಇದು. ಸಚಿವರಾದ ಲಕ್ಮ್ಷಣ ಸವದಿ, ಅಶ್ವತ್ಥನಾರಾಯಣ ಅವರೂ ಇಂತಹ ಅಹವಾಲು ಸ್ವೀಕಾರ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಇದೇ ಹಾದಿ ತುಳಿಯಲಿದ್ದಾರೆ. ನಿರ್ದಿಷ್ಟ ದಿನಾಂಕ ನಿಗದಿಪಡಿಸುವ ವಿಚಾರವೂ ಇದೆ ಎಂದರು.</p>.<p>'ಅಧಿಕಾರ ಸಿಕ್ಕಿದಾಗ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಸಚಿವರು ಸಿಗುವುದು ಕಡಿಮೆಯಾಗುತ್ತದೆ. ಆಗ ಮೊದಲಾಗಿ ನಮ್ಮಿಂದ ದೂರವಾಗುವವರು ಕಾರ್ಯಕರ್ತರು. ಕಮ್ಯುನಿಸ್ಟ್ ಪಕ್ಷದವರಲ್ಲಿ ಈಗಲೂ ಈ ವ್ಯವಸ್ಥೆ ಇದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವತಃ ಮುಖ್ಯಮಂತ್ರಿ ಅವರೇ ಪಕ್ಷದ ಕಚೇರಿಗೆ ಬಂದು ಅಹವಾಲು ಆಲಿಸುತ್ತಿದ್ದರು. ರಾಜ್ಯದಲ್ಲಿ ಇಂತಹ ವ್ಯವಸ್ಥೆ ರೂಪಿಸುವ ಸಲುವಾಗಿ ನಾನು ಕಾರ್ಯಕ್ರಮ ರೂಪಿಸಿದ್ದೇನೆ' ಎಂದು ಸಚಿವ ರವಿ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಧಿಕಾರ ಬಂದಾಗ ಪಕ್ಷದ ಕಾರ್ಯಕರ್ತರು ಮೊದಲಾಗಿ ದೂರವಾಗುವ ಅಪಾಯ ಇದೆ. ಇದನ್ನು ತಪ್ಪಿಸುವ ಸಲುವಾಗಿ ಕಾರ್ಯಕರ್ತರ ಅಹವಾಲುಗಳನ್ನು ಪಕ್ಷದ ಕಚೇರಿಯಲ್ಲಿ ಕುಳಿತು ಆಲಿಸುವ ಪರಿಪಾಠ ಬಿಜೆಪಿ ಕಚೇರಿಯಲ್ಲಿ ಆರಂಭವಾಗಿದೆ.</p>.<p>ಶನಿವಾರ ಬೆಳಿಗ್ಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಜೃತಿ, ಸಕ್ಕರೆ ಸಚಿವ ಸಿ.ಟಿ.ರವಿ ಅವರು ಹೀಗೆ ಅಹವಾಲು ಆಲಿಸಿದರು.<br />ಸ್ವತಃ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಅಹವಾಲು ನೀಡಿದ್ದು ವಿಶೇಷವಾಗಿತ್ತು.</p>.<p>'ನಾನು ನಡೆಸುತ್ತಿರುವ ಎರಡನೇ ಅಹವಾಲು ಸ್ವೀಕಾರ ಕಾರ್ಯಕ್ರಮ ಇದು. ಸಚಿವರಾದ ಲಕ್ಮ್ಷಣ ಸವದಿ, ಅಶ್ವತ್ಥನಾರಾಯಣ ಅವರೂ ಇಂತಹ ಅಹವಾಲು ಸ್ವೀಕಾರ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಚಿವರು ಇದೇ ಹಾದಿ ತುಳಿಯಲಿದ್ದಾರೆ. ನಿರ್ದಿಷ್ಟ ದಿನಾಂಕ ನಿಗದಿಪಡಿಸುವ ವಿಚಾರವೂ ಇದೆ ಎಂದರು.</p>.<p>'ಅಧಿಕಾರ ಸಿಕ್ಕಿದಾಗ ಸಾರ್ವಜನಿಕರಿಗೆ, ಪಕ್ಷದ ಕಾರ್ಯಕರ್ತರಿಗೆ ಸಚಿವರು ಸಿಗುವುದು ಕಡಿಮೆಯಾಗುತ್ತದೆ. ಆಗ ಮೊದಲಾಗಿ ನಮ್ಮಿಂದ ದೂರವಾಗುವವರು ಕಾರ್ಯಕರ್ತರು. ಕಮ್ಯುನಿಸ್ಟ್ ಪಕ್ಷದವರಲ್ಲಿ ಈಗಲೂ ಈ ವ್ಯವಸ್ಥೆ ಇದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸ್ವತಃ ಮುಖ್ಯಮಂತ್ರಿ ಅವರೇ ಪಕ್ಷದ ಕಚೇರಿಗೆ ಬಂದು ಅಹವಾಲು ಆಲಿಸುತ್ತಿದ್ದರು. ರಾಜ್ಯದಲ್ಲಿ ಇಂತಹ ವ್ಯವಸ್ಥೆ ರೂಪಿಸುವ ಸಲುವಾಗಿ ನಾನು ಕಾರ್ಯಕ್ರಮ ರೂಪಿಸಿದ್ದೇನೆ' ಎಂದು ಸಚಿವ ರವಿ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>