<p><strong>ಬೆಂಗಳೂರು/ವಿಜಯಪುರ:</strong> ಗಾಂಧೀಜಿ ಅವರ ಒಡನಾಡಿಯಾಗಿದ್ದಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ, ಆತ ಪಾಕಿಸ್ತಾನದ ಏಜೆಂಟ್’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿರುವುದು ಖಂಡನೆಗೆ ಗುರಿಯಾಗಿದೆ.</p>.<p>ವಿಜಯಪುರದಲ್ಲಿ ಮಾತನಾಡಿದ ಯತ್ನಾಳ,‘ಸ್ವಾತಂತ್ರ್ಯಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಹೋರಾಟ ಮಾಡಿದ್ದಾರೆ. ಆದರೆ, ಅವರ ತತ್ವ, ಸಿದ್ಧಾಂತಗಳು ಬೇರೆ ಆಗಿದ್ದವು. ದೊರೆಸ್ವಾಮಿ ನಕಲಿ ಹೋರಾಟಗಾರ’ ಎಂದು ಹೇಳಿದ್ದಾರೆ.</p>.<p>‘ಪಾಕಿಸ್ತಾನ ನಮಗೆ ಬಚ್ಚಾ, ನಾವೇ ಅದರ ತಂದೆ. ಪಾಕಿಸ್ತಾನ ಹುಟ್ಟಿದ್ದೇ ನಮ್ಮಿಂದ. ಜವಾಹರಲಾಲ್ ನೆಹರೂ ಅವರ ಸ್ವಾರ್ಥದಿಂದ ಪಾಕಿಸ್ತಾನ ಹುಟ್ಟಿದೆ’ ಎಂದು ಹೇಳಿದರು.</p>.<p>‘ದೊರೆಸ್ವಾಮಿ ವಿರುದ್ಧ ಅತ್ಯಂತ ಕೀಳಾಗಿ ಮಾತನಾಡಿರುವ ಯತ್ನಾಳ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮಕೈಗೊಂಡು ಬಾಯಿ ಮುಚ್ಚಿಸಬೇಕು. ಇಲ್ಲ ಅದು ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.</p>.<p>ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿ ಯತ್ನಾಳ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಚೋದ್ಯ<br /></p>.<p><strong>-ಎಚ್.ಡಿ.ಕುಮಾರಸ್ವಾಮಿ,</strong><strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></p>.<p><strong>***</strong></p>.<p>ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಾಲಿಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ</p>.<p><strong>-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು/ವಿಜಯಪುರ:</strong> ಗಾಂಧೀಜಿ ಅವರ ಒಡನಾಡಿಯಾಗಿದ್ದಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ, ಆತ ಪಾಕಿಸ್ತಾನದ ಏಜೆಂಟ್’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿರುವುದು ಖಂಡನೆಗೆ ಗುರಿಯಾಗಿದೆ.</p>.<p>ವಿಜಯಪುರದಲ್ಲಿ ಮಾತನಾಡಿದ ಯತ್ನಾಳ,‘ಸ್ವಾತಂತ್ರ್ಯಕ್ಕಾಗಿ ಅಟಲ್ ಬಿಹಾರಿ ವಾಜಪೇಯಿ ಹೋರಾಟ ಮಾಡಿದ್ದಾರೆ. ಆದರೆ, ಅವರ ತತ್ವ, ಸಿದ್ಧಾಂತಗಳು ಬೇರೆ ಆಗಿದ್ದವು. ದೊರೆಸ್ವಾಮಿ ನಕಲಿ ಹೋರಾಟಗಾರ’ ಎಂದು ಹೇಳಿದ್ದಾರೆ.</p>.<p>‘ಪಾಕಿಸ್ತಾನ ನಮಗೆ ಬಚ್ಚಾ, ನಾವೇ ಅದರ ತಂದೆ. ಪಾಕಿಸ್ತಾನ ಹುಟ್ಟಿದ್ದೇ ನಮ್ಮಿಂದ. ಜವಾಹರಲಾಲ್ ನೆಹರೂ ಅವರ ಸ್ವಾರ್ಥದಿಂದ ಪಾಕಿಸ್ತಾನ ಹುಟ್ಟಿದೆ’ ಎಂದು ಹೇಳಿದರು.</p>.<p>‘ದೊರೆಸ್ವಾಮಿ ವಿರುದ್ಧ ಅತ್ಯಂತ ಕೀಳಾಗಿ ಮಾತನಾಡಿರುವ ಯತ್ನಾಳ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮಕೈಗೊಂಡು ಬಾಯಿ ಮುಚ್ಚಿಸಬೇಕು. ಇಲ್ಲ ಅದು ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.</p>.<p>ನಾಡಿನ ಸಾಕ್ಷಿಪ್ರಜ್ಞೆಯಾಗಿರುವ ದೊರೆಸ್ವಾಮಿಯವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸಿ ಯತ್ನಾಳ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ಸಿಡಿಸಿಕೊಂಡಿರುವುದು ಚೋದ್ಯ<br /></p>.<p><strong>-ಎಚ್.ಡಿ.ಕುಮಾರಸ್ವಾಮಿ,</strong><strong>ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></p>.<p><strong>***</strong></p>.<p>ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರ ನಾಲಿಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ</p>.<p><strong>-ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>