‘ಚಿತ್ರದುರ್ಗ ಉಸ್ತುವಾರಿ ಸಚಿವರ ಹೊಣೆ ಜಿಲ್ಲೆಯ ಹೊರಗಿನವರಿಗೆ ಸಿಕ್ಕಿದ್ದೆ ಹೆಚ್ಚು. ಪಕ್ಷ ಅವಕಾಶ ಕಲ್ಪಿಸಿದರೆ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬರಪೀಡಿತ ಪ್ರದೇಶಕ್ಕೆ ಕಾಯಕಲ್ಪ ನೀಡಿ, ನೀರಾವರಿ ಯೋಜನೆಗೆ ಒತ್ತು ನೀಡುತ್ತೇನೆ. ಹಿರಿತನದ ಆಧಾರದ ಮೇರೆಗೆ ಸಚಿವ ಸ್ಥಾನದ ಅವಕಾಶ ಸಿಗುತ್ತದೆ ಎಂಬ ನಂಬಿಕೆ ಇದೆ. ಸಿಗುವ ಹುದ್ದೆಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.