ಬೆಂಗಳೂರು: ‘ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತೆ ಭಾಷಣ ಮಾಡಿದ ಆರೋಪದಿಂದ ಸಂಸದ ಅನಂತ ಕುಮಾರ ಹೆಗಡೆ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಖುಲಾಸೆಗೊಳಿಸಿದೆ.
ಈ ಕುರಿತಂತೆ ಪ್ರಕರಣದ ವಿಚಾರಣೆ ನಡೆಸಿದ್ದ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ಅವರು ಅನಂತಕುಮಾರ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯ ಆಧಾರದಲ್ಲಿ ಆರೋಪಮುಕ್ತಗೊಳಿಸಿದ್ದಾರೆ.
ಪ್ರಕರಣವೇನು?: ‘2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಅನಂತ ಕುಮಾರ್ ಅವರು ಶಿರಸಿಯ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ವೇಳೆ ಪ್ರಚೋದನಕಾರಿ ಅಂಶಗಳನ್ನು ಪ್ರಸ್ತಾಪಿಸಿದ್ದರು’ ಎಂದು ಆರೋಪಿಸಿದ ಪ್ರಕರಣ ಇದಾಗಿತ್ತು.