ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ತಿದ್ದುಪಡಿಯಂತೆ ಸರ್ಕಾರಿ ಯೋಜನೆಗಳಿಗೆ ಮಾತ್ರವಲ್ಲದೆ, ಸರ್ಕಾರಿ–ಖಾಸಗಿ ಸಹಭಾಗಿತ್ವದ ಯೋಜನೆಗಳಿಗೂ ರೈತರ ಫಲವತ್ತಾದ ಜಮೀನು ವಶಪಡಿಸಿಕೊಳ್ಳಬಹುದಾಗಿದೆ. ಈ ತಿದ್ದುಪಡಿಯಿಂದ ರೈತರಿಗೆ ಸಿಗುವ ಪರಿಹಾರದಲ್ಲಿ ಶೇ 400ರಷ್ಟು ಕಡಿಮೆಯಾಗಲಿದೆ’ ಎಂದರು.