<p><strong>ಜೈಪುರ:</strong> ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಶಾಸಕರಿಗೆ ₹25 ಕೋಟಿ ಆಮಿಷವೊಡ್ಡುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನೆಲ್ಲ ಶಾಸಕರನ್ನು ಜೈಪುರದ ರೆಸಾರ್ಟ್ವೊಂದಕ್ಕೆ ಕರೆಸಿಕೊಂಡು ಸಭೆ ನಡೆಸಿತು. ನಂತರ ಮಾತನಾಡಿರುವ ಮುಖ್ಯಮಂತ್ರಿ ಗೆಹ್ಲೋಟ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>‘ಮಧ್ಯಪ್ರದೇಶದಲ್ಲಿ ಮಾಡಿದ ರೀತಿಯಲ್ಲೇ ರಾಜಸ್ಥಾನದಲ್ಲೂ ಮಾಡಲು ಬಿಜೆಪಿ ಹೊರಟಿದೆ ಎಂದು ಗೊತ್ತಾಗಿದೆ. ಕಾಂಗ್ರೆಸ್ ಶಾಸಕರಿಗೆ ₹25 ಕೋಟಿಗಳ ಆಮಿಷವೊಡ್ಡಲಾಗುತ್ತಿದೆ. ₹10 ಕೋಟಿಯನ್ನು ಮುಂಗಡವಾಗಿ ನೀಡುವುದಾಗಿ ನಂಬಿಸುತ್ತಿದೆ. ಜೈಪುರಕ್ಕೆ ದೊಡ್ಡ ಮಟ್ಟದ ಹಣ ರವಾನೆಯಾಗಿದೆ,’ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>‘ಆದರೆ, ಬಿಜೆಪಿಯ ಈ ಪ್ರಯತ್ನಗಳು ಫಲಿಸುವುದಿಲ್ಲ. ಕಾಂಗ್ರೆಸ್ ಶಾಸಕರು ಒಟ್ಟಾಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಯಕರ ಪಾಡು ಈಗ ಅತಂತ್ರವಾಗಿದೆ,’ಎಂದೂ ಅವರು ಹೇಳಿದರು.</p>.<p>‘ರಾಜ್ಯಸಭೆಯನ್ನು ಗೆಲ್ಲುವ ಸಲುವಾಗಿ ಬಿಜೆಪಿಯು ಶಾಸಕರನ್ನು ಖರೀದಿಸಲು ಮುಂದಾಗಿತ್ತು. ಆದರೆ, ಶಾಸಕರು ಖರೀದಿಗೆ ಸಿಗದೇಹೋದಾಗ ಅದು ಚುನಾವಣೆಯನ್ನೇ ಮುಂದೂಡಿತ್ತು,’ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಗೆಹ್ಲೋಟ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಶಾಸಕರಿಗೆ ₹25 ಕೋಟಿ ಆಮಿಷವೊಡ್ಡುತ್ತಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನೆಲ್ಲ ಶಾಸಕರನ್ನು ಜೈಪುರದ ರೆಸಾರ್ಟ್ವೊಂದಕ್ಕೆ ಕರೆಸಿಕೊಂಡು ಸಭೆ ನಡೆಸಿತು. ನಂತರ ಮಾತನಾಡಿರುವ ಮುಖ್ಯಮಂತ್ರಿ ಗೆಹ್ಲೋಟ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>‘ಮಧ್ಯಪ್ರದೇಶದಲ್ಲಿ ಮಾಡಿದ ರೀತಿಯಲ್ಲೇ ರಾಜಸ್ಥಾನದಲ್ಲೂ ಮಾಡಲು ಬಿಜೆಪಿ ಹೊರಟಿದೆ ಎಂದು ಗೊತ್ತಾಗಿದೆ. ಕಾಂಗ್ರೆಸ್ ಶಾಸಕರಿಗೆ ₹25 ಕೋಟಿಗಳ ಆಮಿಷವೊಡ್ಡಲಾಗುತ್ತಿದೆ. ₹10 ಕೋಟಿಯನ್ನು ಮುಂಗಡವಾಗಿ ನೀಡುವುದಾಗಿ ನಂಬಿಸುತ್ತಿದೆ. ಜೈಪುರಕ್ಕೆ ದೊಡ್ಡ ಮಟ್ಟದ ಹಣ ರವಾನೆಯಾಗಿದೆ,’ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>‘ಆದರೆ, ಬಿಜೆಪಿಯ ಈ ಪ್ರಯತ್ನಗಳು ಫಲಿಸುವುದಿಲ್ಲ. ಕಾಂಗ್ರೆಸ್ ಶಾಸಕರು ಒಟ್ಟಾಗಿದ್ದಾರೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನಾಯಕರ ಪಾಡು ಈಗ ಅತಂತ್ರವಾಗಿದೆ,’ಎಂದೂ ಅವರು ಹೇಳಿದರು.</p>.<p>‘ರಾಜ್ಯಸಭೆಯನ್ನು ಗೆಲ್ಲುವ ಸಲುವಾಗಿ ಬಿಜೆಪಿಯು ಶಾಸಕರನ್ನು ಖರೀದಿಸಲು ಮುಂದಾಗಿತ್ತು. ಆದರೆ, ಶಾಸಕರು ಖರೀದಿಗೆ ಸಿಗದೇಹೋದಾಗ ಅದು ಚುನಾವಣೆಯನ್ನೇ ಮುಂದೂಡಿತ್ತು,’ ಎಂದು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಗೆಹ್ಲೋಟ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>