ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಕಾಶ ಬಳಕೆಗೆ ಬಿಜೆಪಿ ಸನ್ನದ್ಧ: ಸಿ.ಟಿ.ರವಿ

Last Updated 15 ಜನವರಿ 2019, 13:26 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕಾಂಗ್ರೆಸ್‌ನಲ್ಲಿ ಬಂಡಾಯ ಎದ್ದರೆ ಆ ಸಂದರ್ಭದ ಅವಕಾಶವನ್ನು ಬಿಜೆಪಿ ಬಳಸಿಕೊಳ್ಳಲಿದೆ. ಸುಮ್ಮನಿರಲು ನಾವು ಸನ್ಯಾಸಿಗಳಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊಟ್ಟೆಯಲ್ಲಿ ಪರಸ್ಪರ ವಿರೋಧಗಳನ್ನು ಇಟ್ಟುಕೊಂಡು ಸರ್ಕಾರ ರಚಿಸಿರುವ ಎರಡು ಪಕ್ಷಗಳು ಒಳ್ಳೆಯ ಆಡಳಿತ ನೀಡಲು ಹೇಗೆ ಸಾಧ್ಯ? ಈ ಸರ್ಕಾರ ಉರುಳಬೇಕು ಎಂಬುದು ನಮ್ಮ ಬಯಕೆ ಮತ್ತು ರಾಜ್ಯದ ಜನತೆಯದ್ದೂ ಅದೇ ಆಗಿದೆ’ ಎಂದರು.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಎದ್ದ ಆಕ್ರೋಶ, ನಿಗಮ–ಮಂಡಳಿಗೆ ನೇಮಕ ಮಾಡಲಾಗದ ಅಸಮಾಧಾನಗಳು ಮೈತ್ರಿಯಲ್ಲಿ ಎಲ್ಲವೂ ಸರಿಯಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಈ ಸರ್ಕಾರವು ಉರುಳಿದರೆ ಸಂತೋಷಡುತ್ತೇವೆ. ಆ ದಿನಕ್ಕಾಗಿ ಕಾಯುತ್ತಿದ್ದೇವೆ’ ಎಂದು ಉತ್ತರಿಸಿದರು.

ಬಿಜೆಪಿಯ ಕೆಲ ಶಾಸಕರನ್ನು ಸೆಳೆಯುವ ಯತ್ನವನ್ನು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಾಡಿದ್ದವು. ಅದಕ್ಕೆ ಅವಕಾಶ ಆಗಬಾರದು ಎಂದು ಮುನ್ನಚ್ಚರಿಕೆ ವಹಿಸಿದ್ದೇವೆ. ರಾಷ್ಟ್ರೀಯ ಪರಿಷತ್‌ ಸಭೆಗೆ ನವದೆಹಲಿಗೆ ತೆರಳಿದ್ದೆವು. ಅಷ್ಟರಲ್ಲಿ ಕಾಂಗ್ರೆಸ್‌ನಲ್ಲಿನ ರಾಜಕೀಯ ವಿದ್ಯಮಾನಗಳು ಗಮನಕ್ಕೆ ಬಂದವು. ಹೀಗಾಗಿ ಎಚ್ಚರಿಕೆ ವಹಿಸಿದೆವು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT