‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ಕೆಲವೇ ಪ್ರಮುಖರಿಗೆ ಸೀಮಿತವಾಗಿದೆ. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಜಿ.ಪರಮೇಶ್ವರ ಅವರಿಗೆ ಮೈತ್ರಿ ಬೇಕಾಗಿದೆ. ಆದರೆ, ಎರಡನೇ ಹಂತದ ನಾಯಕರು ಹಾಗೂ ಕಾರ್ಯಕರ್ತರು ಮೈತ್ರಿಗೆ ಸಮ್ಮತಿ ವ್ಯಕ್ತಪಡಿಸಿಲ್ಲ. ಹಾಗಾಗಿ, ಪ್ರತಿದಿನ ಬೀದಿಕಾಳಗ ನಡೆಯುತ್ತಿದೆ. ಜತೆಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಮುಖ ಹೆದ್ದಾರಿಗಳಲ್ಲಿ ಹಂಪ್ ಹಾಕಿದ್ದಾರೆ’ ಎಂದು ಅವರು ಲೇವಡಿ ಮಾಡಿದರು.