‘ಸಮರ್ಥ ನಾಯಕತ್ವ ಸ್ವಾವಲಂಬಿ ಭಾರತ ಅಭಿಯಾನ’ದ ಭಾಗವಾಗಿ ವಿಡಿಯೊ ಸಂವಾದ ಮೂಲಕ ಈ ಕಾರ್ಯಕ್ರಮ ನಡೆಯಲಿದೆ. ಫೇಸ್ಬುಕ್, ಯೂಟ್ಯೂಬ್ ಚಾನಲ್ ಹಾಗೂ ಕೇಬಲ್ ಟಿವಿಗಳಲ್ಲಿ ನೇರಪ್ರಸಾರ ನಡೆಯಲಿದೆ.ಸಂಜೆ 7ರಿಂದ 8 ಗಂಟೆಯವರೆಗೆ ‘ಚೀನಾ ಸೋಲಿಸಿ-ಭಾರತ ಗೆಲ್ಲಿಸೋಣ’ ಅಭಿಯಾನ ನಡೆಯಲಿದೆ. ರಾಜ್ಯದ 58 ಸಾವಿರ ಬೂತ್ಗಳ 50 ಲಕ್ಷಕ್ಕೂ ಹೆಚ್ಚು ಮನೆಗಳಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸ್ವದೇಶಿ ಅಭಿಯಾನದ ಪ್ರತಿಜ್ಞಾ ಸಂಕಲ್ಪ ನಡೆಸಲು ಪಕ್ಷ ತೀರ್ಮಾನಿಸಿದೆ.