ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಅದು ಡಿ.ಕೆ.ಶಿವಕುಮಾರ್, ಚಿದಂಬರಂ ಯಾರೂ ಇದಕ್ಕೆ ಹೊರತಾಗಿಲ್ಲ. ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಉತ್ತಮ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೂ ಹೀಗೆಯೇ ಕಾರ್ಯನಿರ್ವಹಿಸಿವೆ. ಎರಡೂ ತನಿಖಾ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದರು.