ಜಿಲ್ಲೆಯ ವಿವಿಧ ಕಡೆ ಉದ್ಯೋಗ ಖಾತರಿ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಜೂನ್ನಲ್ಲಿ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯುತ್ತಿದ್ದು, ಚುನಾವಣೆ ನಡೆಸಬಹುದು ಎಂದು ಚುನಾವಣೆ ಆಯೋಗಕ್ಕೆ ಕೇಳಿಕೊಳ್ಳಲಾಗಿತ್ತು. ಆದರೆ, ಚುನಾವಣೆ ಆಯೋಗವು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ, ಈಗ ಚುನಾವಣೆ ನಡೆಸುವುದಿಲ್ಲ ಎಂದು ಹೇಳಿದೆ. ಆಯೋಗ ನಿರ್ಧಾರದ ವಿರುದ್ಧ ಸರ್ಕಾರ ಹೋಗುವುದಿಲ್ಲ ಎಂದು ತಿಳಿಸಿದರು.