ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅತೃಪ್ತರು ಮುಂದಿನ ವಾರ ದೆಹಲಿಗೆ

Last Updated 25 ಫೆಬ್ರುವರಿ 2020, 19:48 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ ಕಾರಣಗಳಿಗೆ ಮುನಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟದ ಕೆಲವು ಸಚಿವರು ಮತ್ತು ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಸಿಟ್ಟಾಗಿರುವ ಶಾಸಕರು ಒಟ್ಟಾಗಿ ಮುಂದಿನ ವಾರ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲು ಸಿದ್ಧತೆ ನಡೆಸಿದ್ದಾರೆ.

ಸಚಿವ ಸಂಪುಟದಲ್ಲಿ ಖಾಲಿ ಉಳಿದಿರುವ ಸಚಿವ ಸ್ಥಾನಗಳ ಭರ್ತಿ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳ ನೇಮಕವೂ ಸೇರಿ ಹಲವು ಬೇಡಿಕೆಗಳನ್ನು ವರಿಷ್ಠರ ಮುಂದಿಡಲಿದ್ದಾರೆ. ಹಿರಿಯ ಶಾಸಕ ಉಮೇಶ ಕತ್ತಿ, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಈ ನಿಯೋಗ ತೆರಳಲಿದ್ದು, ಕೆಲವು ಹಿರಿಯ ಸಚಿವರೂ ಇರಲಿದ್ದಾರೆ ಎಂದು ಮೂಲಗಳು ಹೇಳಿವೆ.

ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡುವುದರ ಜತೆಗೆಪಕ್ಷದ ಮೂಲ ಶಾಸಕರಿಗೆ ಆದ್ಯತೆ ನೀಡಬೇಕು ಎಂದು ಶಾಸಕರು ಒತ್ತಾಯಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT