‘15 ಕ್ಷೇತ್ರಗಳಲ್ಲಿ ಜೆಡಿಎಸ್ ಒಂದೂ ಸ್ಥಾನ ಗೆದ್ದಿಲ್ಲ. ಆದರೆ, ಇಲ್ಲಿಗೇ ರಾಜಕೀಯ ಮುಗಿಯಲಿಲ್ಲ. 1989ರಲ್ಲಿ ಜೆಡಿಎಸ್ ಎರಡು ಸ್ಥಾನದಲ್ಲಷ್ಟೆ ಇತ್ತು. ಹೀಗಾಗಿ, ಕಾರ್ಯಕರ್ತರು ಧೃತಿಗೆಡಬೇಕಿಲ್ಲ. ಪಕ್ಷವನ್ನು ಮುಗಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿವೆ. ಬಿಜೆಪಿ ಜತೆ ಸೇರಿ 20–20 ಸರ್ಕಾರ ರಚಿಸಿ, ಎಚ್.ಡಿ.ಕುಮಾರಸ್ವಾಮಿ ತಪ್ಪು ಮಾಡಿದರು. ಪಕ್ಷ ಸಂಘಟನೆ ಮಾಡಿ 2023ರ ವೇಳೆಗೆ ಜೆಡಿಎಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.