ಹಾಸನ: ಶಾಸಕ ಪ್ರೀತಂ ಜೆ.ಗೌಡ ಮನೆಗೆ ಮುತ್ತಿಗೆ ಹಾಕಿದ ಹಾಗೂ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದಜೆಡಿಎಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿಯ ನೂರಾರುಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಜೆಡಿಎಸ್ ವಿರುದ್ಧ ಘೋಷಣೆ ಕೂಗಿದರು. ಎನ್.ಆರ್.ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಯೋಗಾರಮೇಶ್, ಮುಖಂಡರಾದ ನವಲೆ ಅಣ್ಣಪ್ಪ, ರೇಣುಕುಮಾರ್, ವೇಣುಗೋಪಾಲ್, ನಾಗೇಶ್, ಶೋಬನ್ ಬಾಬು, ಹುಲ್ಲಳ್ಳಿ ಸುರೇಶ್ ಭಾಗವಹಿಸಿದ್ದರು.