ಕಂದಾಯ ಸಚಿವ ಆರ್.ಅಶೋಕ್ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ‘ಶಾಸಕ ರಾಜೂಗೌಡ ಅವರು ಇಂದಿರಾ ಕ್ಯಾಂಟೀನ್ಗಳಿಗೆ ಮಹರ್ಷಿ ವಾಲ್ಮೀಕಿ ಅನ್ನಕುಟೀರ ಎಂದು ಮರುನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ. ಈ ಮನವಿ ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಚರ್ಚಿಸಿದ ನಂತರ ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು. ಬೆಂಗಳೂರು ನಗರ ನನ್ನ ವ್ಯಾಪ್ತಿಗೆ ಬರುವುದಿಲ್ಲ’ ಎಂದು ತಿಳಿಸಿದರು.