‘ನಿಮ್ಮ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಪತ್ರಕರ್ತರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿ, ನಿಂದನೆ ಮಾಡುತ್ತಿದ್ದಾರೆ. ಟಿಪ್ಪುವಿನ ದೌರ್ಜನ್ಯದ ಕುರಿತು ಮಾತನಾಡಿದ ಪತ್ರಕರ್ತ ಸಂತೋಷ್ ತಮ್ಮಯ್ಯಅವರನ್ನು ಬಂಧಿಸಲಾಗಿತ್ತು. ಮುಖ್ಯಮಂತ್ರಿ ಪುತ್ರನ ನಡವಳಿಕೆ ಬಗ್ಗೆ ವರದಿ ಮಾಡಿದ್ದಕ್ಕೆ ವಿಶ್ವೇಶ್ವರ ಭಟ್ ವಿರುದ್ಧಎಫ್ಐಆರ್ ದಾಖಲಿಸಲಾಗಿದೆ. ಇದು ನಿಮ್ಮ ಆಷಾಢಭೂತಿತನವನ್ನು ತೋರಿಸುತ್ತದೆ’ ಎಂದು ಬಿಜೆಪಿ ಕರ್ನಾಟಕ ಘಟಕ ಟ್ವೀಟ್ ಮಾಡಿದೆ.