<p><strong>ಬೆಂಗಳೂರು:</strong> ‘ಆಪರೇಷನ್ ಕಮಲ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರು ಒಂದು ಸಾವಿರ ಕೋಟಿ ರೂಪಾಯಿ ಕಪ್ಪು ಹಣ ಬಳಕೆ ಮಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಲ್ಲಿ ಮಂಗಳವಾರ ಆರೋಪಿಸಿದರು.</p>.<p>ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್, ಜೆಡಿಎಸ್ನ 17 ಅನರ್ಹಗೊಂಡಿರುವ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಇವರಿಗೆ ನೀಡಿರುವ ಹಣ, ಉಪಚುನಾವಣೆ ಖರ್ಚು ಲೆಕ್ಕ ಹಾಕಿದರೆ ಸಾವಿರ ಕೋಟಿ ದಾಟುತ್ತದೆ. ಈಗ ಪ್ರತಿ ಕ್ಷೇತ್ರದಲ್ಲಿ ಗೆಲುವಿ<br />ಗಾಗಿ ₹50ರಿಂದ 60 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ವರ್ಗಾವಣೆ ದಂಧೆ, ಭ್ರಷ್ಟಾಚಾರ ನಡೆಸಿ ಇಷ್ಟೊಂದು ದೊಡ್ಡ ಮೊತ್ತವನ್ನು ಬಿಜೆಪಿ ನಾಯಕರು ಸಂಗ್ರಹಿಸಿದ್ದಾರೆ. ಚುನಾವಣೆ ಆಯೋಗ, ಆದಾಯತೆರಿಗೆ ಇಲಾಖೆಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ’ ಎಂದರು.</p>.<p><strong>ಸೋಲಿನ ಭಯ:</strong> ಸೋಲುವ ಆತಂಕದಿಂದ ಬಿಜೆಪಿ ಮುಖಂಡರು ಜಾತಿ, ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈಗ ಸಚಿವ ಮಾಧುಸ್ವಾಮಿ ವಿರುದ್ಧವೂ ದೂರು ಕೊಡಲಾಗಿದೆ. ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಹೇಳಿದರು.</p>.<p><strong>ಸೇರಿಸಿಕೊಂಡಿಲ್ಲ:</strong> ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ವಾಪಸ್ ಪಕ್ಷಕ್ಕೆ ಬರುವುದಾಗಿ ಕೇಳಿಕೊಂಡರೂ ಸೇರಿಸಿಕೊಂಡಿಲ್ಲ ಎಂದರು.</p>.<p><strong>‘ಬಿಎಸ್ವೈ ಕೆನ್ನೆಗೆ ಹೊಡೆಯಬೇಕೆ?’: </strong>‘ಕಾಂಗ್ರೆಸ್ನಲ್ಲಿರುವ ಲಿಂಗಾಯತ– ವೀರಶೈವರು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೆನ್ನೆಗೆ ಹೊಡೆಯಬೇಕೆ’ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.</p>.<p>‘ಲಿಂಗಾಯತ– ವೀರಶೈವರು ಬಿಜೆಪಿ ಅಭ್ಯರ್ಥಿ ಹೊರತುಪಡಿಸಿ ಅನ್ಯ ಪಕ್ಷದವರಿಗೆ ಮತ ನೀಡಿದರೆ ಯಡಿಯೂರಪ್ಪ ಕೆನ್ನೆಗೆ ಹೊಡೆದಂತೆ’ ಎಂದುಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಆಪರೇಷನ್ ಕಮಲ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಮುಖಂಡರು ಒಂದು ಸಾವಿರ ಕೋಟಿ ರೂಪಾಯಿ ಕಪ್ಪು ಹಣ ಬಳಕೆ ಮಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಲ್ಲಿ ಮಂಗಳವಾರ ಆರೋಪಿಸಿದರು.</p>.<p>ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್, ಜೆಡಿಎಸ್ನ 17 ಅನರ್ಹಗೊಂಡಿರುವ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ. ಇವರಿಗೆ ನೀಡಿರುವ ಹಣ, ಉಪಚುನಾವಣೆ ಖರ್ಚು ಲೆಕ್ಕ ಹಾಕಿದರೆ ಸಾವಿರ ಕೋಟಿ ದಾಟುತ್ತದೆ. ಈಗ ಪ್ರತಿ ಕ್ಷೇತ್ರದಲ್ಲಿ ಗೆಲುವಿ<br />ಗಾಗಿ ₹50ರಿಂದ 60 ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ವರ್ಗಾವಣೆ ದಂಧೆ, ಭ್ರಷ್ಟಾಚಾರ ನಡೆಸಿ ಇಷ್ಟೊಂದು ದೊಡ್ಡ ಮೊತ್ತವನ್ನು ಬಿಜೆಪಿ ನಾಯಕರು ಸಂಗ್ರಹಿಸಿದ್ದಾರೆ. ಚುನಾವಣೆ ಆಯೋಗ, ಆದಾಯತೆರಿಗೆ ಇಲಾಖೆಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ’ ಎಂದರು.</p>.<p><strong>ಸೋಲಿನ ಭಯ:</strong> ಸೋಲುವ ಆತಂಕದಿಂದ ಬಿಜೆಪಿ ಮುಖಂಡರು ಜಾತಿ, ಧರ್ಮದ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈಗ ಸಚಿವ ಮಾಧುಸ್ವಾಮಿ ವಿರುದ್ಧವೂ ದೂರು ಕೊಡಲಾಗಿದೆ. ಆಯೋಗ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಹೇಳಿದರು.</p>.<p><strong>ಸೇರಿಸಿಕೊಂಡಿಲ್ಲ:</strong> ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ವಾಪಸ್ ಪಕ್ಷಕ್ಕೆ ಬರುವುದಾಗಿ ಕೇಳಿಕೊಂಡರೂ ಸೇರಿಸಿಕೊಂಡಿಲ್ಲ ಎಂದರು.</p>.<p><strong>‘ಬಿಎಸ್ವೈ ಕೆನ್ನೆಗೆ ಹೊಡೆಯಬೇಕೆ?’: </strong>‘ಕಾಂಗ್ರೆಸ್ನಲ್ಲಿರುವ ಲಿಂಗಾಯತ– ವೀರಶೈವರು ನಮ್ಮ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೆನ್ನೆಗೆ ಹೊಡೆಯಬೇಕೆ’ ಎಂದು ದಿನೇಶ್ ಗುಂಡೂರಾವ್ ಪ್ರಶ್ನಿಸಿದರು.</p>.<p>‘ಲಿಂಗಾಯತ– ವೀರಶೈವರು ಬಿಜೆಪಿ ಅಭ್ಯರ್ಥಿ ಹೊರತುಪಡಿಸಿ ಅನ್ಯ ಪಕ್ಷದವರಿಗೆ ಮತ ನೀಡಿದರೆ ಯಡಿಯೂರಪ್ಪ ಕೆನ್ನೆಗೆ ಹೊಡೆದಂತೆ’ ಎಂದುಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>