ಪಾಲಿಕೆ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ‘ಟಿಪ್ಪು ಸುಲ್ತಾನ ಒಬ್ಬ ಮತಾಂಧ. ಹಿಂದೂಗಳ ಕೊಲೆಗಡುಕ. ಆತನ ಹೆಸರಿನಲ್ಲಿ ಜಯಂತಿ ಆಚರಿಸುವುದರಲ್ಲಿ ಅಥವಾ ರಸ್ತೆಗಳಿಗೆ ಆತನ ಹೆಸರಿಡುವುದರಲ್ಲಿ ಅರ್ಥವಿಲ್ಲ. ಅದರ ಬದಲು ಮದಕರಿ ನಾಯಕ, ಎ.ಪಿ.ಜೆ.ಅಬ್ದುಲ್ ಕಲಾಂ ಅಂಥವರ ಜಯಂತಿ ಆಚರಿಸಬೇಕು’ ಎಂದು ಅಭಿಪ್ರಾಯಪಟ್ಟರು.