ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರು ಜೆಡಿಎಸ್ನಿಂದ ಉಚ್ಛಾಟಿಸಿದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕುಪೇಂದ್ರ ರೆಡ್ಡಿ ಅವರು ಕಾಂಗ್ರೆಸ್ ಬೇಕಾದರೆ ಮೈತ್ರಿ ಕಡಿದುಕೊಳ್ಳಲಿ ಎಂದು ಹೇಳಿಕೆ ನೀಡಿದ್ದಾರೆ. ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗುತ್ತದೆ. ಸಮ್ಮಿಶ್ರ ಸರ್ಕಾರದ ರಚನೆ ಮಾಡುವ ಮೊದಲು ಸಿದ್ದರಾಮಯ್ಯ ಅವರನ್ನು ಕೇಳಿರಲಿಲ್ಲ. ಕೌಂಟಿಂಗ್ ಮುಗಿಯುವ ಮೊದಲೇ ಸಮ್ಮಿಶ್ರ ಸರ್ಕಾರ ರಚನೆಯ ಘೋಷಣೆ ಮಾಡಿದರು ಎಂದರು.