<p><strong>ಬೆಳಗಾವಿ:</strong> ‘ರಾಜ್ಯೋತ್ಸವ ದಿನದಂದು ‘ಕರಾಳ ದಿನ’ ಆಚರಿಸಲು ಯಾರಿಗೂ ಅವಕಾಶವಿಲ್ಲ. ಆ ರೀತಿ ಯಾರಾದರೂ ಮಾಡಿದರೆ ಅದು ದೇಶದ್ರೋಹದ ಕೆಲಸವಾಗುತ್ತದೆ. ಇಂತಹವರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಬಹುದು’ ಎಂದು ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ಎಲ್. ಮಂಜುನಾಥ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ರಾಜ್ಯೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದರು.</p>.<p>‘1956ರಲ್ಲಿ ಕರ್ನಾಟಕ ಏಕೀಕರಣ ನಂತರ ಇಲ್ಲಿ ಹುಟ್ಟಿದವರೆಲ್ಲ ಕನ್ನಡಿಗರಾಗಿದ್ದಾರೆ. ಅವರ ಮಾತೃಭಾಷೆ ಬೇರೆಯಾಗಿರಬಹುದು. ಆದರೂ, ಅವರು ಕನ್ನಡಿಗರಾಗಿದ್ದಾರೆ. ರಾಜ್ಯದ ಸೌಲಭ್ಯ ಪಡೆದು, ರಾಜ್ಯದ ವಿರುದ್ಧವೇ ಕಾರ್ಯಕ್ರಮ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅಂತಹವರ ವಿರುದ್ಧ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬಹುದು’ ಎಂದರು.</p>.<p><strong>ಚರ್ಚಿಸಿ ತೀರ್ಮಾನ</strong></p>.<p>‘ರಾಜ್ಯದ ಗಡಿಯೊಳಗೆ ಬಂದು ಪ್ರಚೋದನಾ ಹೇಳಿಕೆ ನೀಡದಂತೆ ಮಹಾರಾಷ್ಟ್ರದ ಜನಪ್ರತಿನಿಧಿಗಳಿಗೆ ತಡೆಯಾಜ್ಞೆ (ಇಂಜಕ್ಷನ್) ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಬಗ್ಗೆ ಯೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಹೇಳಿದರು.</p>.<p><strong>ರಾಜಕೀಯ ಇಚ್ಛಾಶಕ್ತಿ</strong></p>.<p>‘ಅಂತರರಾಜ್ಯ ನದಿಗಳ ವ್ಯಾಜ್ಯ ಕುರಿತಂತೆ ನ್ಯಾಯಾಲಯ ತೀರ್ಪು ನೀಡಿದ್ದರೂ ಅಧಿಸೂಚನೆ ಪ್ರಕಟವಾಗುತ್ತಿಲ್ಲ. ನೀರು ಹಂಚಿಕೆ ಮಾಡಿ ನೀಡಿದ ತೀರ್ಪುಗಳೂ ಜಾರಿಯಾಗುತ್ತಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಾಗುತ್ತದೆ’ ಎಂದು ಅವರು ಮಹಾದಾಯಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.</p>.<p>ಆಯೋಗದ ಸದಸ್ಯರಾದ ಜೀನದತ್ತ ದೇಸಾಯಿ, ಎಂ.ಬಿ. ಝಿರಲಿ, ಎಸ್.ಎಂ. ಕುಲಕರ್ಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯೋತ್ಸವ ದಿನದಂದು ‘ಕರಾಳ ದಿನ’ ಆಚರಿಸಲು ಯಾರಿಗೂ ಅವಕಾಶವಿಲ್ಲ. ಆ ರೀತಿ ಯಾರಾದರೂ ಮಾಡಿದರೆ ಅದು ದೇಶದ್ರೋಹದ ಕೆಲಸವಾಗುತ್ತದೆ. ಇಂತಹವರ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಬಹುದು’ ಎಂದು ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ಎಲ್. ಮಂಜುನಾಥ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ರಾಜ್ಯೋತ್ಸವ ತಡೆಯಲು ಯಾರಿಂದಲೂ ಸಾಧ್ಯವಿಲ್ಲ’ ಎಂದರು.</p>.<p>‘1956ರಲ್ಲಿ ಕರ್ನಾಟಕ ಏಕೀಕರಣ ನಂತರ ಇಲ್ಲಿ ಹುಟ್ಟಿದವರೆಲ್ಲ ಕನ್ನಡಿಗರಾಗಿದ್ದಾರೆ. ಅವರ ಮಾತೃಭಾಷೆ ಬೇರೆಯಾಗಿರಬಹುದು. ಆದರೂ, ಅವರು ಕನ್ನಡಿಗರಾಗಿದ್ದಾರೆ. ರಾಜ್ಯದ ಸೌಲಭ್ಯ ಪಡೆದು, ರಾಜ್ಯದ ವಿರುದ್ಧವೇ ಕಾರ್ಯಕ್ರಮ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅಂತಹವರ ವಿರುದ್ಧ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬಹುದು’ ಎಂದರು.</p>.<p><strong>ಚರ್ಚಿಸಿ ತೀರ್ಮಾನ</strong></p>.<p>‘ರಾಜ್ಯದ ಗಡಿಯೊಳಗೆ ಬಂದು ಪ್ರಚೋದನಾ ಹೇಳಿಕೆ ನೀಡದಂತೆ ಮಹಾರಾಷ್ಟ್ರದ ಜನಪ್ರತಿನಿಧಿಗಳಿಗೆ ತಡೆಯಾಜ್ಞೆ (ಇಂಜಕ್ಷನ್) ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಬಗ್ಗೆ ಯೋಚಿಸಿ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ಹೇಳಿದರು.</p>.<p><strong>ರಾಜಕೀಯ ಇಚ್ಛಾಶಕ್ತಿ</strong></p>.<p>‘ಅಂತರರಾಜ್ಯ ನದಿಗಳ ವ್ಯಾಜ್ಯ ಕುರಿತಂತೆ ನ್ಯಾಯಾಲಯ ತೀರ್ಪು ನೀಡಿದ್ದರೂ ಅಧಿಸೂಚನೆ ಪ್ರಕಟವಾಗುತ್ತಿಲ್ಲ. ನೀರು ಹಂಚಿಕೆ ಮಾಡಿ ನೀಡಿದ ತೀರ್ಪುಗಳೂ ಜಾರಿಯಾಗುತ್ತಿಲ್ಲ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಾಗುತ್ತದೆ’ ಎಂದು ಅವರು ಮಹಾದಾಯಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.</p>.<p>ಆಯೋಗದ ಸದಸ್ಯರಾದ ಜೀನದತ್ತ ದೇಸಾಯಿ, ಎಂ.ಬಿ. ಝಿರಲಿ, ಎಸ್.ಎಂ. ಕುಲಕರ್ಣಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>