ನಗರದಿಂದ ಹೊರ ಊರುಗಳಿಗೆ ಹೋಗಲು ಜನ ಮುಗಿ ಬಿದ್ದಿದ್ದಾರೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣಗಳಿಂದ ಹೊರಟ ಎಲ್ಲಾ ಬಸ್ಗಳು ಭರ್ತಿಯಾಗಿ ತೆರಳಿದವು. ಕರ್ನಾಟಕ ಸಾರಿಗೆ ಮಾತ್ರವಲ್ಲದೇ ಚಿಕ್ಕಮಗಳೂರು, ಮಂಗಳೂರು, ತಿರುಪತಿ, ಶಿವಮೊಗ್ಗ, ಮಡಿಕೇರಿಗೆ ಹೋದ ಐಷಾರಾಮಿ ಬಸ್ಗಳು ಭರ್ತಿಯಾಗಿಯೇ ತೆರಳಿವೆ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.