ಬಾಗಲಕೋಟೆ:‘ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿಗೆ ಸಂಬಂಧಿಸಿದಂತೆ, ಇದು ಆಗಬಾರದಿತ್ತು. ಆಗಿ ಹೋಗಿದೆ. ಯಾರ ಮೇಲೂ ಬಾಂಬ್ ಹಾಕಬಾರದಿತ್ತು. ಮಾನವೀಯ ದೃಷ್ಟಿಯಿಂದ ಉಗ್ರರೇ ಇರಲಿ, ಯೋಧರೇ ಆಗಲಿ. ಯಾರೇ ಇರಲಿ ಬಾಂಬ್ ದಾಳಿ ನಡೆಸಬಾರದಿತ್ತು’ ಎಂದು ಮಾಧ್ಯಮದವರ ಎದುರು ಹೇಳಿಕೆ ನೀಡಿದ್ದ ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ, ಅದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಪ್ರಸಂಗ ಬುಧವಾರ ನಗರದಲ್ಲಿ ನಡೆಯಿತು.