ಬೇರೆ ಪ್ರಯಾಣಿಕರೊಬ್ಬರನ್ನು ಕರೆತಂದಿದ್ದ ಆಟೊ ರಿಕ್ಷಾ ಕೆಂಜಾರಿಗೆ ಬಂದಾಗ ಆರೋಪಿ ಅಲ್ಲಿ ನಡೆದು ಹೋಗುತ್ತಿದ್ದ. ಕೈ ಅಡ್ಡ ಹಾಕಿ, 'ಕದ್ರಿ ದೇವಸ್ಥಾನಕ್ಕೆ ಬಿಡುತ್ತೀರಾ? ಎಷ್ಟು ದರ?' ಎಂದು ವಿಚಾರಿಸಿದ್ದ. ಆಟೊ ಚಾಲಕ ಹೇಳಿದ್ದ ಮೊತ್ತಕ್ಕೆ ಒಪ್ಪದೇ ಕಾವೂರುವರೆಗೆ ಮಾತ್ರ ಆಟೊದಲ್ಲಿ ಬಂದಿದ್ದ. ಅಲ್ಲಿ ಇಳಿದು ನಾಪತ್ತೆಯಾಗಿದ್ದಾನೆ.