ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯಗಳ ರಚನೆ ಸಂದರ್ಭದಲ್ಲಿಯೇ ಗಡಿ ವಿಷಯವು ಇತ್ಯರ್ಥವಾಗಿದೆ. ಇಂದು ಮಹಾರಾಷ್ಟ್ರ ಸರ್ಕಾರ ಎತ್ತಿರುವ ಎಲ್ಲ ವಿಷಯಗಳ ಬಗ್ಗೆ ಅಂದಿನ ಸಮಿತಿಯು ಅಧ್ಯಯನ ಮಾಡಿದ ನಂತರವೇ ಗಡಿ ಗುರುತಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ಅರ್ಜಿಯನ್ನು ತಿರಸ್ಕರಿಸಬೇಕೆಂದು ಕೇಂದ್ರ ಸರ್ಕಾರವು ತನ್ನ ಹೇಳಿಕೆಯನ್ನು ಅಫಿಡವಿಟ್ ಮೂಲಕ ಸುಪ್ರೀಂ ಕೋರ್ಟ್ಗೆ ತಿಳಿಸಿದೆ’ ಎಂದು ವಿವರಿಸಿದರು.