ಸಾಕ್ಷ್ಯಾಧಾರಗಳ ಕೊರತೆ: 2009ರ ಜನವರಿಯಲ್ಲಿ ಮಂಗಳೂರಿನ ಬಲ್ಮಠ ರಸ್ತೆಯಲ್ಲಿರುವ ಅಮ್ನೇಸಿಯಾ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿದ್ದ ಪಬ್ ಮೇಲೆ ದಾಳಿ ಮಾಡಿದ್ದ ಗುಂಪೊಂದು, ಅಲ್ಲಿದ್ದ ಯುವಕ, ಯುವತಿಯರ ಮೇಲೆ ಹಲ್ಲೆ ನಡೆಸಿತ್ತು. ಪಬ್ನ ಸಿಬ್ಬಂದಿಗೂ ಬೆದರಿಸಿ, ವಿವಿಧ ವಸ್ತುಗಳಿಗೆ ಹಾನಿ ಮಾಡಿತ್ತು. ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ 30 ಮಂದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಒಬ್ಬ ಆರೋಪಿ ವಿಚಾರಣೆ ನಡುವೆಯೇ ಮೃತಪಟ್ಟಿದ್ದ. ಮೂವರು ಇನ್ನೂ ತಲೆಮರೆಸಿಕೊಂಡಿದ್ದಾರೆ. 26 ಮಂದಿ ವಿರುದ್ಧ ಮಾತ್ರ ವಿಚಾರಣೆ ನಡೆದಿತ್ತು.