ಆತ ತಾಲ್ಲೂಕಿನ ಹೆಬ್ಬಟ್ಟಗೇರಿಯ ನಿವಾಸಿ.ಪ್ರಕೃತಿ ವಿಕೋಪದ ವೇಳೆ ಮನೆ ಕಳೆದುಕೊಂಡಿದ್ದ ಬಾಲಕನ ಕುಟುಂಬದವರು ಮಡಿಕೇರಿ ಹೊರವಲಯದ ಮನೆಯೊಂದರಲ್ಲಿ ವಾಸವಾಗಿದ್ದರು. ಶಾಲೆಗೆ ರಜೆಯಿದ್ದ ಕಾರಣಕ್ಕೆ ಬಾಲಕ ಮನೆಯಲ್ಲಿ ಆಟವಾಡುತ್ತಿದ್ದ. ಆಕಸ್ಮಿಕವಾಗಿ ವೇಲ್ ಕುತ್ತಿಗೆಗೆ ಸುತ್ತಿಕೊಂಡಿದೆ. ಅದನ್ನು ಬಿಡಿಸಿಕೊಳ್ಳಲು ಒದ್ದಾಡಿದ್ದಾನೆ. ಆತನ ತಂದೆ ಮನೆಗೆ ಬಂದು ನೋಡಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ.