<p><strong>ಭಾರತೀನಗರ (ಮಂಡ್ಯ)</strong>: ಸಮೀಪದ ಹನುಂತನಗರದ ಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಡೆದ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.</p>.<p>ಕರಡಕೆರೆ ಗ್ರಾಮದ ಕುಳ್ಳೇಗೌಡ ಅವರ ಪುತ್ರ ಶಿವಕುಮಾರ್ (13) ಮೃತಪಟ್ಟ ಬಾಲಕ. ಅದೇ ಗ್ರಾಮದ ನಾಥೇಗೌಡ ಅವರ ಪುತ್ರ ಲಿಂಗೇಗೌಡ (50) ಅವರ ಕಾಲು ಮುರಿದಿದೆ.</p>.<p>ರಥವನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಿಲ್ಲಿಸಲಾಗಿತ್ತು. ರಥಮನೆಗೆ ರಥವನ್ನು ನಿಲ್ಲಿಸುವಾಗ ಶಿವಕುಮಾರ್ ಚಕ್ರಕ್ಕೆ ಸಿಲುಕಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಲಿಂಗೇಗೌಡ ಅವರ ಕಾಲು ಮುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ (ಮಂಡ್ಯ)</strong>: ಸಮೀಪದ ಹನುಂತನಗರದ ಆತ್ಮಲಿಂಗೇಶ್ವರ ಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ನಡೆದ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಬಾಲಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.</p>.<p>ಕರಡಕೆರೆ ಗ್ರಾಮದ ಕುಳ್ಳೇಗೌಡ ಅವರ ಪುತ್ರ ಶಿವಕುಮಾರ್ (13) ಮೃತಪಟ್ಟ ಬಾಲಕ. ಅದೇ ಗ್ರಾಮದ ನಾಥೇಗೌಡ ಅವರ ಪುತ್ರ ಲಿಂಗೇಗೌಡ (50) ಅವರ ಕಾಲು ಮುರಿದಿದೆ.</p>.<p>ರಥವನ್ನು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ನಿಲ್ಲಿಸಲಾಗಿತ್ತು. ರಥಮನೆಗೆ ರಥವನ್ನು ನಿಲ್ಲಿಸುವಾಗ ಶಿವಕುಮಾರ್ ಚಕ್ರಕ್ಕೆ ಸಿಲುಕಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಲಿಂಗೇಗೌಡ ಅವರ ಕಾಲು ಮುರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>