ಶಿವಗಿರಿ ಮಠದ ವಿಷುದಾನಂದ ಸ್ವಾಮೀಜಿಯ ಉಪಸ್ಥಿತಿಯಲ್ಲಿ ಹಾಗೂ ಸುಗುದಾನಂದ ತಂತ್ರಿ ಮತ್ತು ಕ್ಷೇತ್ರದ ಲಕ್ಷ್ಮಣ ಶಾಂತಿಯ ಪೌರೋಹಿತ್ಯದಲ್ಲಿ ನೂತನ ಧ್ವಜಸ್ತಂಭ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿವಿಧಾನಗಳು ಇದೇ 10ರಂದು ಆರಂಭಗೊಂಡಿದ್ದು 17ರ ವರೆಗೆ ನಡೆಯಲಿದೆ. 17ರಂದು ಬೆಳಿಗ್ಗೆ 7.35ಕ್ಕೆ ರಾಜಗೋಪುರ ಶಿಖರ ಪ್ರತಿಷ್ಠೆ, ಧ್ವಜರೋಹಣ, ಮಧ್ಯಾಹ್ನ 12.15ಕ್ಕೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ.