‘ಆರು ತಿಂಗಳ ಹಿಂದೆಯಷ್ಟೇ ಇಲಾಖೆ ಅಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಹಣ ಕೊಡುವಂತೆಹಲವು ಬಾರಿ ಫೋನ್ ಮಾಡಿಸಿದ್ದಾರೆ. ಆದರೆ, ನಾನು ಹಣ ನೀಡಿಲ್ಲ. ಅದೇ ದ್ವೇಷದಿಂದ ಮನೆಗೆ ಕರೆಸಿಕೊಂಡು ಏಕವಚನದಲ್ಲಿ ನಿಂದಿಸಿದ್ದರು. ಕೋವಿಡ್–19 ತಡೆಗಟ್ಟಲು ಜಿಲ್ಲಾಧಿಕಾರಿ ರಚಿಸಿರುವ ಮೂರು ಸಮಿತಿಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಪ್ರತಿ ಬಾರಿ ಕೆಲಸಕ್ಕೆ ಅಡ್ಡಿ ಮಾಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗೂ ಮೌಖಿಕ ದೂರು ನೀಡಿದ್ದೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.