<p><strong>ಬೆಂಗಳೂರು: </strong>ಸಿಗರೇಟ್ ವ್ಯಾಪಾರಿ ಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಪ್ರಭುಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಮೂರು ಪ್ರತ್ಯೇಕ ಎಫ್ಐಆರ್ಗಳಿಗೆ ನೀಡಲಾಗಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ 23ರವರೆಗೂ ವಿಸ್ತರಿಸಿದೆ.</p>.<p>ಎಫ್ಐಆರ್ ರದ್ದು ಕೋರಿ ಪ್ರಭುಶಂಕರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.</p>.<p>ಅರ್ಜಿದಾರರ ವಿರುದ್ಧ ಎಸಿಬಿ ದಾಖಲಿಸಿರುವ ಮೂರು ಎಫ್ಐಆರ್ ಗಳಿಗೆ ಈ ಹಿಂದೆ ನೀಡಲಾಗಿರುವ ತಡೆ ಆದೇಶವನ್ನೂ ಮುಂದಿನ ವಿಚಾರಣೆ ತನಕ ವಿಸ್ತರಿಸಲಾಗಿದೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಠಾಣೆಯ ಪೊಲೀಸರು ದಾಖಲಿಸಿರುವ ಎರಡು ಪ್ರತ್ಯೇಕ<br />ಎಫ್ಐಆರ್ಗಳಿಗೂ ತಡೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಿಗರೇಟ್ ವ್ಯಾಪಾರಿ ಗಳಿಂದ ಹಣ ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಎಸಿಪಿ ಪ್ರಭುಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಮೂರು ಪ್ರತ್ಯೇಕ ಎಫ್ಐಆರ್ಗಳಿಗೆ ನೀಡಲಾಗಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಇದೇ 23ರವರೆಗೂ ವಿಸ್ತರಿಸಿದೆ.</p>.<p>ಎಫ್ಐಆರ್ ರದ್ದು ಕೋರಿ ಪ್ರಭುಶಂಕರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.</p>.<p>ಅರ್ಜಿದಾರರ ವಿರುದ್ಧ ಎಸಿಬಿ ದಾಖಲಿಸಿರುವ ಮೂರು ಎಫ್ಐಆರ್ ಗಳಿಗೆ ಈ ಹಿಂದೆ ನೀಡಲಾಗಿರುವ ತಡೆ ಆದೇಶವನ್ನೂ ಮುಂದಿನ ವಿಚಾರಣೆ ತನಕ ವಿಸ್ತರಿಸಲಾಗಿದೆ.</p>.<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಠಾಣೆಯ ಪೊಲೀಸರು ದಾಖಲಿಸಿರುವ ಎರಡು ಪ್ರತ್ಯೇಕ<br />ಎಫ್ಐಆರ್ಗಳಿಗೂ ತಡೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>