‘ಮಾರ್ಚ್ ಆರಂಭದಲ್ಲಿ 15 ಕೆಜಿ ಬದನೆಕಾಯಿ ಒಂದು ಚೀಲಕ್ಕೆ ₹150 ರವರೆಗೂ ದರ ಸಿಕ್ಕಿತ್ತು. ಈಗ ಒಂದು ಚೀಲಕ್ಕೆ ₹20 ರಿಂದ ₹30 ಕ್ಕೆ ಕೇಳುತ್ತಿದ್ದಾರೆ. ರಾಯಚೂರು ತರಕಾರಿ ಮಾರುಕಟ್ಟೆಗೆ ಕಳುಹಿಸಿದ್ದ ಬದನೆಕಾಯಿ ಚೀಲಗಳು ಅಲ್ಲಿಯೇ ಉಳಿದಿವೆ. ಬದನೆಕಾಯಿ ಚೀಲದ ದರ ₹20 ಇದೆ. ಅದನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗುವುದಕ್ಕೆ ₹10 ಖರ್ಚಾಗುತ್ತದೆ. ಈ ಪರಿಸ್ಥಿತಿಯಿಂದ ಬೇಸತ್ತು ಗಿಡ ಕಿತ್ತುಹಾಕುತ್ತಿದ್ದೇನೆ’ ಎಂದು ‘ಪ್ರಜಾವಾಣಿ’ಯೊಂದಿಗೆ ನೋವು ಹಂಚಿಕೊಂಡರು.