ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಿ 2013ರಲ್ಲಿ ಪೆಷಾವರ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಾಖೀಬ್ ನಿಸಾರ್ ಒಳಗೊಂಡ ತ್ರಿಸದಸ್ಯ ಪೀಠ, ಜುಲೈ 25ರಂದು ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಷರತ್ತುಬದ್ಧ ಅನುಮತಿ ನೀಡಿದೆ.