ಕುಪಿತಗೊಂಡ ಸಂಸದ ಸಂಗಣ್ಣ ಕರಡಿ ಡಿವೈಎಸ್ಪಿ ಎಸ್.ಎಂ.ಸಂದಿಗವಾಡ ಅವರನ್ನು ಹಿಡಿದುಕೊಂಡು ಎಳೆದಾಡಿದರು. ಸ್ಥಳೀಯ ಶಾಸಕರ ನಿರ್ದೇಶನದಂತೆ ಪೊಲೀಸ್ ಸಿಬ್ಬಂದಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ವಾಗ್ವಾದ ನಡೆಯಿತು. ಇದೇ ರೀತಿ ಪ್ರತಿಭಟನೆ ನಡೆಸಿದರೆ, ದೂರು ದಾಖಲಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದರು.