ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯೋತ್ಸವ ಭಾಷಣ| ನೆರೆ ಸಂತ್ರಸ್ತರ ನೆರವಿಗೆ ನಿಲ್ಲುವ ಘೋಷಣೆ

Last Updated 15 ಆಗಸ್ಟ್ 2019, 4:58 IST
ಅಕ್ಷರ ಗಾತ್ರ

ಅತ್ತ ದೆಹಲಿಯಲ್ಲಿ ಮೋದಿ ಅವರು ಧ್ಜಜಾರೋಹಣ ನೆರವೇರಿಸಿ, ಭಾಷಣ ಮಾಡಿ ಮುಗಿಸುತ್ತಲೇ ಇತ್ತ, ಬೆಂಗಳೂರಿನ ಮಾಣೇಕ್‌ ಷಾ ಪರೇಡ್‌ ಮೈದಾನದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಧ್ಜಜಾರೋಹಣ ನೆರವೇರಿಸಿದರು. ನಂತರ ಅವರು ಭಾಷಣ ಆರಂಭಿಸಿದರು. ಭಾಷಣದ ಮುಖ್ಯಾಂಶಗಳು ಇಲ್ಲಿವೆ.

-ಅತಿವೃಷ್ಟಿ, ಅನಾವೃಷ್ಟಿ ಪರಿಸ್ಥಿತಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಅರ್ಧ ರಾಜ್ಯ ಈಗ ಜಲಪ್ರಳಯಕ್ಕೆ ಒಳಗಾಗಿದೆ. ಪ್ರವಾಹದಿಂದ ಈವರೆಗೆ 65 ಮಂದಿ ಸಾವಿಗೀಡಾಗಿದ್ದಾರೆ.

-ಪ್ರವಾಹದಲ್ಲಿಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷದಂತೆ ಪರಿಹಾರ ನೀಡಲಾಗುತ್ತಿದೆ.ಈವರೆಗೆ 6.97 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 859 ಜಾನುವಾರುಗಳು ಸಾವನ್ನಪ್ಪಿವೆ.

-ಪ್ರವಾಹ ಸಂತ್ರಸ್ತರಿಗೆ ತಕ್ಷಣದ ನೆರವಿಗೆ ₹10 ಸಾವಿರ, ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ದುರಸ್ತಿ ಮಾಡಿಕೊಳ್ಳಲು 1 ಲಕ್ಷ ನೆರವು ನೀಡಲಾಗುವುದು.

-ಇತ್ತೀಚೆಗೆ ರಾಜ್ಯದಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರ ಪ್ರಾತಿನಿಧ್ಯ ಕಡಿಮೆಯಾಗುತ್ತಿದೆ ಎಂಬ ಕೂಗೆದ್ದಿದೆ. ರಾಜ್ಯದಲ್ಲಿನ ಉದ್ಯೋಗಗಳಲ್ಲಿ ಅಧಿಕಾಂಶ ಕನ್ನಡಿಗರಿಗೇ ದೊರೆಯಬೇಕೆಂಬುದು ನಮ್ಮ ನಿಲುವು. ನಮ್ಮ ಸರ್ಕಾರದ ನೀತಿಯೂ ಇದೇ ಆಗಿದೆ

-ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಮೊದಲ ಕಂತಿನಲ್ಲಿ ತಲಾ ₹2,000 ಗಳನ್ನು ಒಂದು ಲಕ್ಷ ಅರ್ಹ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ

-ಗ್ರಾಮೀಣಾಭಿವೃದ್ಧಿ ಮತ್ತು ನೀರಾವರಿಗೆ ಆದ್ಯತೆ.

-ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರಕ್ಕೆ ಸಹಕಾರ ನೀಡಲಾಗುವುದು.

-ಕೈಗಾರಿಕೆಗಳ ಉತ್ತೇಜನ, ಕೌಶಲಾಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ

-ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಈಸ್ ಆಫ್ ಡ್ಯೂಯಿಂಗ್ ಬಿಸಿನೆಸ್ ಗುರಿಗಳಲ್ಲಿ ಶೇ 98ಕ್ಕೂ ಹೆಚ್ಚು ಸಾಧನೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಶೇ 100 ರಷ್ಟು ಗುರಿ ಸಾಧಿಸುವ ಮೂಲಕ ಹೂಡಿಕೆದಾರರನ್ನು ಆಕರ್ಷಿಸಲಾಗುವುದು.

-ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

-ಬೆಂಗಳೂರು ಅಭಿವೃದ್ಧಿ ಕಾರ್ಯಪಡೆಯನ್ನು ಬಲ ಪಡಿಸಲಾಗುವುದು

-ವಿದ್ಯುತ್ ಉತ್ಪಾದನೆಯಲ್ಲಿ ಅಗ್ರಪಂಕ್ತಿ ಕಾಯ್ದುಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಕೈಗಾರಿಕೋದ್ಯಮಗಳಿಗೆ, ಕೃಷಿಗೆ ಅನಿರ್ಬಂಧಿತ ವಿದ್ಯುತ್ ಒದಗಿಸಲಾಗುವುದು.

-ಕೇಂದ್ರ ಸರ್ಕಾರವುಕಾಶ್ಮೀರವನ್ನುಕಪಿಮುಷ್ಟಿಯಿಂದ ಬಿಡುಗಡೆಗೊಳಿಸಿದೆ. ಸಂವಿಧಾನದ 370ನೇ ವಿಧಿಯ ಸೇರ್ಪಡೆಗೆ ಸ್ವಯಃ ಡಾ. ಬಿ‌.ಆರ್. ಅಂಬೇಡ್ಕರ್ ಅವರೇ ವಿರೋಧ ವ್ಯಕ್ತಪಡಿಸಿದ್ದರು. ದೇಶದ ಅಖಂಡತೆಗೆ ಇದರಿಂದ ಧಕ್ಕೆಯಾಗುವುದು ಎಂದು ಅವರು ಭಾವಿಸಿದ್ದರು.

-ಪ್ರಧಾನಿ ನರೇಂದ್ರ ಮೋದಿಯವರ ಈ ದಿಟ್ಟ ನಿರ್ಧಾರವನ್ನು ರಾಷ್ಟ್ರ ಮತ್ತು ವಿಶ್ವ ಸ್ವಾಗತಿಸಿವೆ. ಈ ಚರಿತ್ರಾರ್ಹ ನಿರ್ಧಾರದಿಂದ ಭಾರತೀಯ ಇತಿಹಾಸದಲ್ಲಿ ನರೇಂದ್ರ ಮೋದಿಯವರ ಹೆಸರು ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT