ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಅವರೇ ಉಳಿದ ಅವಧಿಗೂ ಮುಖ್ಯಮಂತ್ರಿ: ಆರ್. ಅಶೋಕ್

Last Updated 3 ಜೂನ್ 2020, 8:16 IST
ಅಕ್ಷರ ಗಾತ್ರ

ರಾಮನಗರ: ಮುಂದಿನ ಮೂರು ವರ್ಷದ ಅವಧಿಗೂ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿ. ನಮ್ಮಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟನೆ ನೀಡಿದರು.

ಬುಧವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ನಮ್ಮಲ್ಲಿನ ಪ್ರತಿ ಶಾಸಕ, ಕಾರ್ಯಕರ್ತರಿಗೂ ಬೇಕಾದ್ದನ್ನು ಕೇಳುವ ಹಕ್ಕಿದೆ. ಕೆಲವರು ಕೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ. ಕಾಂಗ್ರೆಸ್‌ನಹಾಗೆ ನಮ್ಮದು ದುರ್ಬಲ ಹೈಕಮಾಂಡ್ ಅಲ್ಲ’ ಎಂದು ಟೀಕಿಸಿದರು.

‘ಒಡೆದು ಆಳುವುದು ಕಾಂಗ್ರೆಸ್ನ ಚಾಳಿ. ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿದ್ದೂ ಅವರೇ. ಈಗ ಜೆಡಿಎಸ್‌ನವರಿಗೆ ಅದರ ಅರಿವಾಗಿದೆ. ಹಿಂದೊಮ್ಮೆ ನಾವು ಜೆಡಿಎಸ್ ಜೊತೆಗೂಡಿ ಆಡಳಿತ ನಡೆಸಿದ್ದೇವೆ. ಮತ್ತೆ ಸಹಕಾರ ನೀಡುವುದಾದರೆ ಸ್ವಾಗತಿಸುತ್ತೇವೆ’ ಎಂದರು.

ರಾಜ್ಯಸಭೆ, ಪರಿಷತ್ ಚುನಾವಣೆ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ನಡೆಯಲಿದ್ದು, ನಂತರವಷ್ಟೇ ಅಭ್ಯರ್ಥಿಗಳ ತೀರ್ಮಾನ ಆಗಲಿದೆ. ಈವರೆಗೆ ಪಕ್ಷ ಯಾರನ್ನೂ ಅಂತಿಮಗೊಳಿಸಿಲ್ಲ ಎಂದರು.

‘ರಾಜ್ಯದ ಮೇಲೆ ನಿಸರ್ಗ ಚಂಡಮಾರುತದ ಪ್ರಭಾವ ಕಡಿಮೆ. ಆದಾಗ್ಯು ರಾಜ್ಯದ ಕರಾವಳಿ, ಮಲೆನಾಡು ಹಾಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT