ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ‘ಪ್ರಧಾನಿ ಅವರೊಂದಿಗೆ ನೆರೆ ಹಾವಳಿ, ಸಂತ್ರಸ್ತರ ಬಗ್ಗೆ 40 ನಿಮಿಷಗಳ ಕಾಲ ಚರ್ಚೆ ನಡೆಸಿದ್ದೇವೆ. ಜತೆಗೆ, ತುರ್ತು ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಂಡಿದ್ದೇವೆ.ತಕ್ಷಣವೇ ಅಧ್ಯಯನ ತಂಡ ಕಳುಹಿಸುವುದಾಗಿಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.