ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಕಡತಗಳನ್ನು ನೋಡಲಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸವಾಲು

Last Updated 6 ಜುಲೈ 2020, 8:18 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19ಗೆ ಸಂಬಂಧಿಸಿದಂತೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದು ಎಲ್ಲ ದಾಖಲೆಗಳನ್ನು ಪರಿಶೀಲಿಸಬಹುದು. ಅದಕ್ಕೆ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಯಾವುದೇ ದಾಖಲೆಗಳನ್ನು ಇಟ್ಟುಕೊಳ್ಳದೇ ಹಲವು ದಿನಗಳಿಂದ ಸಿದ್ದರಾಮಯ್ಯ ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ. ಇಷ್ಟು ದಿನ ಅವರ ಟೀಕೆಗಳನ್ನು ಕೇಳಿಕೊಂಡು ಮೌನವಾಗಿದ್ದೆ. ಅವರೇ ಬಂದು ಖರೀದಿಗೆ ಸಂಬಂಧಿಸಿದ ಅಂಕಿ–ಅಂಶಗಳನ್ನು ಪರಿಶೀಲಿಸಲಿ ಎಂದು ಸುದ್ದಿಗಾರರಿಗೆ ತಿಳಿಸಿದರು.

ಒಂದು ವೇಳೆ ಖರೀದಿಯಲ್ಲಿ ಯಾವುದೇ ಲೋಪದೋಷ ಆಗಿರುವುದು ಕಂಡು ಬಂದರೆ, ಅಧಿಕಾರಿಗಳಾಗಲಿ, ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೇ ಬಿಡುವುದಿಲ್ಲ. ಸಿದ್ದರಾಮಯ್ಯ ವೃಥಾ ಆರೋಪ ಮಾಡುವುದನ್ನು ಬಿಟ್ಟು ಖುದ್ದಾಗಿ ಎಲ್ಲ ಕಡತಗಳನ್ನು ನೋಡಲಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT