ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಅವಧಿ ಮುಗಿದ ಮೇಲೆ ನಾನು ಸಿಎಂ ಆಗುತ್ತೇನೆ: ಕತ್ತಿ

Last Updated 26 ಅಕ್ಟೋಬರ್ 2019, 11:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ಅವರ ಅವಧಿ ಮುಗಿದ ಮೇಲೆ ರಾಜ್ಯದ ಮುಖ್ಯಮಂತ್ರಿ ಆಗುತ್ತೇನೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಈಗ 58 ವರ್ಷ. 70 ವರ್ಷದವರೆಗೆ ಅವಕಾಶವಿದೆ. ಡಿಸಿಎಂ ಆಗಲ್ಲ. ಸಚಿವನಾಗಿ ಮುಖ್ಯಮಂತ್ರಿ ಆಗುತ್ತೇನೆ ಎಂದರು.

ನಾನು ಏಕಾಂಗಿ ಅಲ್ಲ. ನನ್ನೊಂದಿಗೆ ಬಹಳ ಜನರಿದ್ದಾರೆ ಎಂದು ಹೇಳಿದರು.

ಸಿಎಂ ನನ್ನ ಗುರು. ಡಿಸಿಎಂ ಲಕ್ಷ್ಮಣ ಸವದಿ ಆತ್ಮೀಯ ಮಿತ್ರ. ಅನರ್ಹರಿಗೆ ಅವಕಾಶ ಕೊಡಬಾರದು ಎಂದು ಸವದಿ ಹೇಳಿದ್ದಾರೆ. ಅವರಿಗೆ ಅವಕಾಶ ನೀಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT